ಮಂಡ್ಯ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಸುಮಲತಾ ಅಂಬರೀಶ್ ಇವತ್ತು ಮಂಡ್ಯದಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ರು. ಈ ವೇಳೆ ಮಂಡ್ಯದಾದ್ಯಂತ ಕೇಬಲ್ ಸಂಪರ್ಕ ಸ್ಥಗಿತಗೊಂಡಿದ್ದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಸುಮಲತಾ ರ್ಯಾಲಿಗೆ ಜನಸಾಗರವೇ ಹರಿದು ಬಂದಿತ್ತು. ಇದರ ನೇರಪ್ರಸಾರವನ್ನ ಜನರು ನೋಡಬಾರದು ಎಂಬ ಕಾರಣಕ್ಕಾಗಿ ಕೇಬಲ್ ಕಟ್ ಮಾಡಲಾಗಿದೆ ಎನ್ನಲಾಗಿದೆ. ಇದ್ರ ಹಿಂದೆ ಸರ್ಕಾರದ ಕೈವಾಡವಿದ್ಯಾ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
