ಗದಗ: ಕಳೆದ ಹಲವು ದಿನಗಳಿಂದ ಹುಲಕೋಟಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿ 80 ಸಾವಿರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಆರೋಪಿ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಮಹಿಳೆ ದೇವಕ್ಕ ನಾರಾಯಣ ಬೆಳ್ಳಿಕೊಪ್ಪ ಎಂದು ಗುರುತಿಸಲಾಗಿದ್ದು, ನಾಲ್ಕು ಕೆ.ಜಿ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ದಿ ನ್ಯೂಸ್24 ಕನ್ನಡ