ವಿಜಯಪುರ: ಬಸ್ ನಿಲ್ದಾಣದಲ್ಲಿ ಮಲಗಿದ್ದ ಭಿಕ್ಷುಕನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರದ ವಿಶ್ವೇಶ್ವರ ಕಾಲನಿ ಸಿಟಿಬಸ್ ನಿಲ್ದಾಣದಲ್ಲಿ ನಡೆದಿದೆ.
ಕಳೆದ ಮೂರ್ನಾಲ್ಕು ತಿಂಗಳಿಂದ ಬಸ್ ನಿಲ್ದಾಣದಲ್ಲೆ ವಾಸಿಸುತ್ತಿದ್ದ ಭಿಕ್ಷುಕ , ನಿನ್ನೆ ತಡರಾತ್ರಿ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆದರ್ಶನಗರ ಪಿಎಸ್ಐ ಶರಣಬಸಪ್ಪ ಅಜೂರ ಮತ್ತು ಶ್ವಾನ ದಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿನಾಯಕ ತಂಗಾ
ದಿ ನ್ಯೂಸ್ 24 ಕನ್ನಡ